Home News ಕದಿರಿನಾಯಕನಹಳ್ಳಿಯಲ್ಲಿ ಶ್ರೀ ಗಣಪತಿ ಹಾಗು ಶ್ರೀ ಆಂಜನೇಯಸ್ವಾಮಿ ಪ್ರತಿಷ್ಠಾಪನಾ ಮಹೋತ್ಸವ

ಕದಿರಿನಾಯಕನಹಳ್ಳಿಯಲ್ಲಿ ಶ್ರೀ ಗಣಪತಿ ಹಾಗು ಶ್ರೀ ಆಂಜನೇಯಸ್ವಾಮಿ ಪ್ರತಿಷ್ಠಾಪನಾ ಮಹೋತ್ಸವ

0

ತಾಲ್ಲೂಕಿನ ಕದಿರಿನಾಯಕನಹಳ್ಳಿ ಗ್ರಾಮದಲ್ಲಿ ಶ್ರೀ ಗಣಪತಿ ಹಾಗು ಶ್ರೀ ಆಂಜನೇಯಸ್ವಾಮಿ ಪ್ರತಿಷ್ಠಾಪನಾ ಮಹೋತ್ಸವ ಅದ್ದೂರಿಯಾಗಿ ನೆರವೇರಿತು.
ದೇವರ ಪ್ರತಿಷ್ಠಾಪನಾ ಮಹೋತ್ಸವದ ಪ್ರಯುಕ್ತ ದೇವಾಲಯದಲ್ಲಿ ವಿಶೇಷ ಅಲಂಕಾರ, ಪೂಜಾ ಮಹೋತ್ಸವದೊಂದಿಗೆ ಭಕ್ತಿಗೀತೆ, ಭಾವಗೀತೆ, ಭೋಜನ ವ್ಯವಸ್ಥೆಯನ್ನು ಮಾಡಲಾಗಿತ್ತು.
ದೇವರನ್ನು ಮತ್ತು ದೇವಾಲಯವನ್ನು ವಿವಿಧ ಹೂಗಳಿಂದ ಅಲಂಕರಿಸಲಾಗಿತ್ತು. ತಾಲೂಕಿನ ಹಾಗೂ ಸುತ್ತಮುತ್ತಲಿನ ನೂರಾರು ಭಕ್ತರು ಆಗಮಿಸಿ ದೇವರ ಪೂಜೆಯಲ್ಲಿ ಪಾಲ್ಗೊಂಡರು.