Home News ದಿಬ್ಬೂರಹಳ್ಳಿ ಜನಸ್ಪಂದನಾ ಕಾರ್ಯಕ್ರಮದಲ್ಲಿ ಆದೇಶಪತ್ರಗಳ ವಿತರಣೆ

ದಿಬ್ಬೂರಹಳ್ಳಿ ಜನಸ್ಪಂದನಾ ಕಾರ್ಯಕ್ರಮದಲ್ಲಿ ಆದೇಶಪತ್ರಗಳ ವಿತರಣೆ

0

ಸರ್ಕಾರದಿಂದ ಬರುವಂತಹ ಯಾವುದೇ ಯೋಜನೆಗಳನ್ನು ಪಡೆಯಲು ಸಾರ್ವಜನಿಕರು ಮಧ್ಯವರ್ತಿಗಳ ಮೊರೆಹೋಗಬಾರದು ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ತಾಲ್ಲೂಕಿನ ದಿಬ್ಬೂರಹಳ್ಳಿ ಗ್ರಾಮದಲ್ಲಿ ಶನಿವಾರ ತಾಲ್ಲೂಕು ಆಡಳಿತ ವತಿಯಿಂದ ಆಯೋಜನೆ ಮಾಡಲಾಗಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಸಂಧ್ಯಾಸುರಕ್ಷಾ, ವಿಧವಾ ವೇತನ, ವೃದ್ಧಾಪ್ಯವೇತನ, ಮನಸ್ವಿನಿ, ಅಂಗವಿಕಲರ ವೇತನ ಸೇರಿದಂತೆ 250 ಆದೇಶಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು.
ಜನಸ್ಪಂದನಾ ಕಾರ್ಯಕ್ರಮಗಳ ಮುಖಾಂತರ ಎಲ್ಲಾ ಸೌಲಭ್ಯಗಳು ಫಲಾನುಭವಿಗಳಿಗೆ ಲಭಿಸಬೇಕು. ಪ್ರತಿಯೊಂದು ಇಲಾಖೆಯಿಂದ ಸಿಗುವಂತಹ ಸೌಲಭ್ಯಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ನೀಡುವಂತಹ ಮಾಹಿತಿಯನ್ನು ಸಂಗ್ರಹಿಸಿಕೊಂಡು ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಹೇಳಿದರು.
ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ ಮಾತನಾಡಿ, ಸೆಪ್ಟೆಂಬರ್‌ ಒಂದರಿಂದ ಖಾತಾ ಮತ್ತು ಪೋಡಿ ಆಂದೋಲನ ತಾಲ್ಲೂಕು ಕಚೇರಿಯಲ್ಲಿ ಏರ್ಪಡಿಸಲಿದ್ದು, ಎಲ್ಲಾ ನಾಗರಿಕರು ಕಾರ್ಯಕ್ರಮವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ಪಶು ವೈಧ್ಯಕೀಯ ಇಲಾಖೆಯ ಸಹಾಯಕ ನಿರ್ದೆಶಕ ಮುನಿನಾರಾಯಣರೆಡ್ಡಿ ಮಾತನಾಡಿ, ರೈತರು ಇಲಾಖೆಯ ಮುಖಾಂತರ ಲಭ್ಯವಿರುವ ಜಂತು ನಾಶಕಗಳನ್ನು ಮೂರು ತಿಂಗಳಿಗೊಮ್ಮೆ ಹಾಕಿಸಬೇಕು. ಕಾಲುಬಾಯಿಜ್ವರದ ಲಸಿಕೆಯು ಲಭ್ಯವಿದೆ ಎಂದು ಇಲಾಖೆಯಿಂದ ಲಭ್ಯವಿರುವ ಯೋಜನೆಗಳ ವಿವರವನ್ನು ನೀಡಿದರು. ರೇಷ್ಮೆ ವಿಸ್ತರಣಾಧಿಕಾರಿ ನಾರಾಯಣಸ್ವಾಮಿ, ಕೃಷಿ ಸಹಾಯಕ ನಿರ್ದೇಶಕ ರಾಘವೇಂದ್ರ ಹಾಗೂ ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಕೀರ್ತಿ ತಮ್ಮ ಇಲಾಖೆಗಳಿಂದ ನೀಡಲಾಗುವ ಸವಲತ್ತುಗಳ ಬಗ್ಗೆ ಹೇಳಿದರು.
ದಿಬ್ಬೂರಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಧನಂಜಯರೆಡ್ಡಿ, ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಶಿವಾರೆಡ್ಡಿ, ಮಾಜಿ ನಿರ್ದೇಶಕ ರಾಮಲಿಂಗಾರೆಡ್ಡಿ, ಶಿವಣ್ಣ, ಗ್ರಾಮ ಪಂಚಾಯತಿ ಸದಸ್ಯರಾದ ಮಂಜುನಾಥ್, ಗೊರ್ಲಪ್ಪ, ವಿಜಯಕುಮಾರ್‌, ವೇಣುಗೋಪಾಲ್‌, ಸರ್ಕಲ್‌ ಇನ್ಸ್‌ಪೆಕ್ಟರ್‌ ಶ್ರೀನಿವಾಸಮೂರ್ತಿ, ಉಪತಹಶೀಲ್ದಾರ್ ಲಕ್ಷ್ಮೀನಾರಾಯಣ, ರಾಜಸ್ವ ನಿರೀಕ್ಷಕ ಮುನಿನಾರಾಯಣಪ್ಪ, ರಾಮಚಂದ್ರ ಮುಂತಾದವರು ಹಾಜರಿದ್ದರು.