Home News ನಮ್ಮ ನಾಡು ಎಂಬ ವಿಶಾಲ ಮನೋಭಾವ ಬೆಳೆಸಿಕೊಳ್ಳಿ

ನಮ್ಮ ನಾಡು ಎಂಬ ವಿಶಾಲ ಮನೋಭಾವ ಬೆಳೆಸಿಕೊಳ್ಳಿ

0

ನಾಡನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಪ್ರತಿಯೊಬ್ಬ ನಾಗರಿಕರೂ ಕಂಕಣಬದ್ಧರಾಗಬೇಕು. ನಮ್ಮ ಕುಟುಂಬ, ನಮ್ಮ ಮನೆ ಎಂದು ಸಂಕುಚಿತಗೊಳ್ಳದೆ ನಮ್ಮ ನಾಡು ಎಂಬ ವಿಶಾಲ ಮನೋಭಾವವನ್ನು ಬೆಳೆಸಿಕೊಳ್ಳುವಂತೆ ಶಾಸಕ ಎಂ.ರಾಜಣ್ಣ ಕರೆನೀಡಿದರು.
ನಗರದ ನೆಹರೂ ಕ್ರೀಡಾಂಗಣದಲ್ಲಿ ಸೋಮವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ 70ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಅವರು ಮಾತನಾಡಿದರು.

ಶಿಡ್ಲಘಟ್ಟದ ನೆಹರೂ ಕ್ರೀಡಾಂಗಣದಲ್ಲಿ ಶನಿವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ 70ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಪೊಲೀಸರಿಂದ ನಡೆದ ಪಥಸಂಚಲನೆ.

ನಾಡಿನ ಜ್ವಲಂತ ಸಮಸ್ಯೆಗಳನ್ನು ನಿವಾರಿಸಲು ಹಾಗೂ ಅದನ್ನು ಪರಿಹರಿಸಲು ಆತ್ಮಾವಲೋಕನ ಮಾಡಿಕೊಳ್ಳುವ ವಿಶೇಷ ದಿನವಿದು. ಹಲವಾರು ಬಲಿದಾನಗಳಿಂದ ಸಿಕ್ಕ ಸ್ವಾತಂತ್ರ್ಯವನ್ನು ದೇಶದ ಅಭ್ಯುದಯಕ್ಕಾಗಿ ಶ್ರಮಿಸುವ ಮೂಲಕ ಆಚರಿಸಬೇಕು. ಸ್ವತಂತ್ರ್ಯ ಚಳುವಳಿಯಲ್ಲಿ ಆತ್ಮಾರ್ಪಣೆ ಮಾಡಿಕೊಂಡ ಸರ್ವ ಮಹಾನುಭಾವರನ್ನು ನಾವು ದಿನ ನಿತ್ಯ ನೆನಯಬೇಕು ಎಂದರು.
ತಹಶೀಲ್ದಾರ್ ಕೆ.ಎಂ.ಮನೋರಮಾ ಮಾತನಾಡಿ, ವ್ಯಾಪರಕ್ಕಾಗಿ ಬಂದ ಬ್ರೀಟಿಷರು ನಮ್ಮಲ್ಲಿರುವ ಅರಾಜಕತೆ, ಏಕತೆಯ ಕೊರತೆಯನ್ನು ಮನಗೊಂಡು ಸುಮಾರು ೩೦೦ ವರ್ಷಗಳ ಕಾಲ ನಮ್ಮ ದೇಶವನ್ನು ಗುಲಾಮಗಿರಿಗೆ ತಳ್ಳಿದರು. ಬ್ರೀಟಿಷರನ್ನು ನಮ್ಮ ದೇಶದಿಂದ ಹೊರಗಟ್ಟಲು ಲಕ್ಷಾಂತರ ಜನ ಪ್ರಾಣಾರ್ಪಣೆ ಮಾಡಬೇಕಾಯಿತು. ನಾವೆಲ್ಲರೂ ರಾಜಕೀಯ ಸ್ವಾತಂತ್ರ್ಯವನ್ನು ಮಾತ್ರ ಪಡೆದುಕೊಂಡಿದ್ದೇವೆ. ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯವನ್ನು ಇನ್ನೂ ಪಡೆಯಬೇಕಾಗಿದೆ ಎಂದು ನುಡಿದರು.
ಪೊಲೀಸ್ ಹಾಗೂ ವಿವಿಧ ಶಾಲೆಗಳ ವಾದ್ಯವೃಂದದ ಪಥ ಸಂಚಲನ ನಡೆಯಿತು. ನಗರಸಭೆಯಿಂದ ತಂದಿದ್ದ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರದ ತೇರಿಗೆ ಪೂಜೆ ಸಲ್ಲಿಸಲಾಯಿತು.
ಶಿಡ್ಲಘಟ್ಟದ ನೆಹರೂ ಕ್ರೀಡಾಂಗಣದಲ್ಲಿ ಶನಿವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ 70ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಥಸಂಚಲನದಲ್ಲಿ ಶಾಲೆಯೊಂದರ ವಾದ್ಯವೃಂದದ ನೇತೃತ್ವ ವಹಿಸಿದ್ದ ಬಾಲಕಿ ಮುಖ್ಯದಂಡವನ್ನು ಆಗಸಕ್ಕೆ ಚಿಮ್ಮಿಸಿ ನಂತರ ಹಿಡಿದಳು.
ಶಿಡ್ಲಘಟ್ಟದ ನೆಹರೂ ಕ್ರೀಡಾಂಗಣದಲ್ಲಿ ಶನಿವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ 70ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಥಸಂಚಲನದಲ್ಲಿ ಶಾಲೆಯೊಂದರ ವಾದ್ಯವೃಂದದ ನೇತೃತ್ವ ವಹಿಸಿದ್ದ ಬಾಲಕಿ ಮುಖ್ಯದಂಡವನ್ನು ಆಗಸಕ್ಕೆ ಚಿಮ್ಮಿಸಿ ನಂತರ ಹಿಡಿದಳು.

ವಿವಿಧ ಶಾಲೆಗಳ ವಿದ್ಯಾರ್ಥಿಗಳು ದೇಶಭಕ್ತಿಯನ್ನು ಪ್ರತಿಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟ ತಂಡಗಳಿಗೆ ಪುಸ್ತಕ ಬಹುಮಾನ ಮತ್ತು ಪ್ರಮಾಣಪತ್ರಗಳನ್ನು ನೀಡಲಾಯಿತು.ಯೂನಿಟಿ ಸಿಲ್ಸಿಲಾ ಫೌಂಡೇಶನ್ ವತಿಯಿಂದ ಪಥಸಂಚಲನದಲ್ಲಿ ಭಾಗವಹಿಸಿದ್ದ ಎಲ್ಲಾ ವಿದ್ಯಾರ್ಥಿಗಳಿಗೆ ಬಿಸ್ಕತ್ತನ್ನು ವಿತರಿಸಿದರು.
ತಾಲ್ಲೂಕು ಪಂಚಾಯತಿ ಅಧ್ಯಕ್ಷ ಲಕ್ಷ್ಮೀನಾರಾಯಣರೆಡ್ಡಿ, ಉಪಾಧ್ಯಕ್ಷ ಎಚ್.ನರಸಿಂಹಯ್ಯ, ಕಾರ್ಯನಿರ್ವಾಹಣಾಧಿಕಾರಿ ವೆಂಕಟೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಜಿಲ್ಲಾ ಪಂಚಾಯತಿ ಸದಸ್ಯ ಬಂಕ್ ಮುನಿಯಪ್ಪ, ನಗರಸಭೆ ಆಯುಕ್ತ ಎಚ್.ಎ.ಹರೀಶ್, ಅಧ್ಯಕ್ಷ ಮುಷ್ಟರಿ ತನ್ವೀರ್, ಉಪಾಧ್ಯಕ್ಷೆ ಸುಮಿತ್ರಾ ರಮೇಶ್, ಸದಸ್ಯ ಅಫ್ಸರ್ಪಾಷ, ತಾಲ್ಲೂಕು ಕ.ಸಾ.ಪ ಅಧ್ಯಕ್ಷ ಬಿ.ಆರ್.ಅನಂತಕೃಷ್ಣ, ತಾಲ್ಲೂಕು ವ.ಸಾ.ಪ ಅಧ್ಯಕ್ಷ ನಾರಾಯಣಸ್ವಾಮಿ, ಸರ್ಕಾರಿ ನೌರಕರರ ಸಂಘದ ಅಧ್ಯಕ್ಷ ಗುರುರಾಜರಾವ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.