Home News ನಿವೃತ್ತ ಶಿಕ್ಷಕ ಎಂ.ಕೃಷ್ಣಪ್ಪ ನಿಧನ

ನಿವೃತ್ತ ಶಿಕ್ಷಕ ಎಂ.ಕೃಷ್ಣಪ್ಪ ನಿಧನ

0

ವಾಲ್ಮೀಕಿ ಸಂಘದ ತಾಲ್ಲೂಕು ಅಧ್ಯಕ್ಷ ಹಾಗೂ ನಿವೃತ್ತ ಶಿಕ್ಷಕ ಎಂ.ಕೃಷ್ಣಪ್ಪ(81) ಗುರುವಾರ ರಾತ್ರಿ ನಿಧನರಾದರು. ಪತ್ನಿ, ಓರ್ವ ಪುತ್ರ ಹಾಗೂ ಮೂವರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅವರು ಅಗಲಿದ್ದಾರೆ. ತಾಲ್ಲೂಕಿನ ಮೇಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ 32 ವರ್ಷ ಸೇವೆಯನ್ನು ಸಲ್ಲಿಸಿದ್ದ ಅವರು ಎಂ.ಕೆ ಮಾಸ್ಟರೆಂದೇ ಪ್ರಸಿದ್ಧರು. ವಿವಿಧ ದೇವಾಲಯಗಳ ಸಂಘದ ನಿರ್ದೇಶಕರಾಗಿ, ಸಾಂಸ್ಕೃತಿಕ ಸಂಘಟಕರಾಗಿ ಸಮಾಜ ಸೇವೆಯನ್ನು ಅವರು ಸಲ್ಲಿಸಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಅವರ ತೋಟದಲ್ಲಿ ಶುಕ್ರವಾರ ನೆರವೇರಿಸಲಾಯಿತು.
ಶಾಸಕ ಎಂ.ರಾಜಣ್ಣ, ಕೆ.ಪಿ.ಸಿ.ಸಿ ಉಪಾಧ್ಯಕ್ಷ ವಿ.ಮುನಿಯಪ್ಪ, ನಗರಸಭೆ ಅಧ್ಯಕ್ಷ ಅಫ್ಸರ್ಪಾಷ, ಸದಸ್ಯರು, ಅಪಾರ ಮಂದಿ ಅವರ ಶಿಷ್ಯರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದರು.