ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳ ಬಳಿ ನಿರ್ಮಾಣ ಹಂತದಲ್ಲಿರುವ ಮೋರಿಗೆ ಬಿದ್ದು ಬೈಕ್ ಸವಾರ ಸ್ಥಳದಲ್ಲೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾನೆ.
ನಗರದ ಗಾಂಧಿನಗರದ ವಾಸಿ ವೆಂಕಟರೆಡ್ಡಿ(೫೦) ಮೃತಪಟ್ಟ ದುರ್ದೈವಿ ಎನ್ನಲಾಗಿದೆ.
ಚಿಕ್ಕಬಳ್ಳಾಪುರದ ಗಿಡ್ನಹಳ್ಳಿಯ ತನ್ನ ಸಂಬಂಧಿಕರ ಮನೆಗೆ ತೆರಳುತ್ತಿದ್ದ ವೆಂಕಟರೆಡ್ಡಿ, ಶಿಡ್ಲಘಟ್ಟದಿಂದ ಚಿಕ್ಕಬಳ್ಳಾಪುರ ಮಾರ್ಗದ ಹಂಡಿಗನಾಳ ಬಳಿ ನಿರ್ಮಾಣ ಹಂತದ ಮೋರಿಗೆ ಬೈಕ್ ಸಮೇತ ಬಿದ್ದು ಮಂಗಳವಾರ ತಡರಾತ್ರಿ ಈ ದುರಂತ ಸಂಭವಿಸಿದೆ.
ರಿ ನಿರ್ಮಾಣದ ವೇಳೆ ಮೋರಿ ಬಳಿ ಯಾವುದೆ ಸೂಚನಾ ಫಲಕಗಳು, ತಡೆಗೋಡೆ ನಿರ್ಮಾಣ ಇನ್ನಿತರೆ ಅಗತ್ಯ ಕ್ರಮಗಳನ್ನು ಕೈಗೊಳ್ಳದೆ ಈ ದುರಂತ ಸಂಭವಿಸಿದ್ದು ಮೃತರ ಪತ್ನಿ ಚಂದ್ರಮ್ಮ ನೀಡಿದ ದೂರಿನ ಮೇರೆಗೆ ಗುತ್ತಿಗೆದಾರನ ಮೇಲೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ.
- Advertisement -
- Advertisement -
- Advertisement -
- Advertisement -