ನಗರದ ಬಡಾವಣೆ ಸರ್ಕಾರಿ ಶಾಲೆಯ ಶಿಕ್ಷಕ ಹಾಗೂ ಹಿರಿಯ ರಂಗಭೂಮಿ ಕಲಾವಿದ ನಾಗರಾಜಶೆಟ್ಟಿ ಅವರನ್ನು ಬೆಂಗಳೂರಿನ ಕಲಾಮಿತ್ರ ಮಂಡಳಿಯವರು ಡಾ.ಪಂಡಿತ್ ಪುಟ್ಟರಾಜು ಗವಾಯಿಗಳ ಸದ್ಭಾವನಾ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.
ಈಚೆಗೆ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವವರನ್ನು ಗುರುತಿಸಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಕಲಾಮಿತ್ರ ಮಂಡಳಿಯ ಗೌರವಾಧ್ಯಕ್ಷ ಕೆಂಚನೂರು ಶಿವಶಂಕರ್, ಅಧ್ಯಕ್ಷ ಆರ್.ಅಪ್ಪುರಾಜ್, ಪ್ರಧಾನ ಕಾರ್ಯದರ್ಶಿ ಮಣಿ ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -
- Advertisement -