Home News ಸಾಲ ಸಕಾಲದಲ್ಲಿ ಮರುಪಾವತಿಸಿ

ಸಾಲ ಸಕಾಲದಲ್ಲಿ ಮರುಪಾವತಿಸಿ

0

ಬ್ಯಾಂಕುಗಳಿಂದ ಪಡೆದ ಸಾಲವನ್ನು ನಿಗಧಿತ ಸಮಯದಲ್ಲಿ ಮರುಪಾವತಿ ಮಾಡುವುದರೊಂದಿಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಮೊತ್ತದ ಸಾಲ ಪಡೆಯುವ ಅವಕಾಶ ಪಡೆದುಕೊಂಡು ಎಲ್ಲರೂ ಆರ್ಥಿಕವಾಗಿ ಮುಂದುವರೆಯಬೇಕು ಎಂದು ಕೋಲಾರ- ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹೇಳಿದರು.
ಶಿಡ್ಲಘಟ್ಟ ಡಿಸಿಸಿ ಬ್ಯಾಂಕ್ನಿಂದ ತಾಲ್ಲೂಕಿನ ಮಳಮಾಚನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಸ್ವ ಸಹಾಯ ಗುಂಪುಗಳಿಗೆ ಸಾಲ ವಿತರಣೆ ಮಾಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮಹಿಳೆಯರಿಗೆ ಅವರ ಮನೆ ಬಾಗಿಲಿಗೆ ಬಂದು ಸಾಲ ಸೌಲಭ್ಯ ವಿತರಿಸುವ ವಿಶೇಷ ಯೋಜನೆಯನ್ನು ರಾಜ್ಯದಲ್ಲಿಯೇ ಮೊಟ್ಟ ಮೊದಲ ಭಾರಿಗೆ ಕೋಲಾರ- ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅನುಷ್ಠಾನಗೊಳಿಸಿದ್ದು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು.
ಗ್ರಾಮೀಣ ಭಾಗದಲ್ಲಿನ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ಡಿ.ಸಿ.ಸಿ ಬ್ಯಾಂಕ್ ತಮ್ಮ ಮನೆ ಬಾಗಿಲಿಗೆ ಬಂದು ಸಾಲ ಸೌಲಭ್ಯ ನೀಡುತ್ತಿದ್ದು ಯಾವ ಉದ್ದೇಶಕ್ಕೆ ಸಾಲ ಪಡೆಯುತ್ತೀರೋ ಅದಕ್ಕಾಗಿಯೇ ಹಣ ಬಳಸಿ ಸಕಾಲದಲ್ಲಿ ಸಾಲ ಮರು ಪಾವತಿಸಬೇಕು. ಇದರಿಂದ ಬ್ಯಾಂಕುಗಳು ಅಭಿವೃದ್ಧಿಯಾಗುತ್ತದೆ ಹಾಗೂ ಮತ್ತೊಬ್ಬರಿಗೆ ಸಾಲ ಸೌಲಭ್ಯ ಕಲ್ಪಿಸಲು ಸಹಕಾರಿಯಾಗುತ್ತದೆ ಹಾಗಾಗಿ ಎಲ್ಲರೂ ಸಕಾಲದಲ್ಲಿ ಸಾಲ ಮರು ಪಾವತಿಸಿ ಸಹಕಾರಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಸಹಕರಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಾಲೂಕಿನ ಮಳಮಾಚನಹಳ್ಳಿ ಗ್ರಾಮದ ಶ್ರೀ ಕಸ್ತೂರಿ ಮಹಿಳಾ ಸ್ವ-ಸಹಾಯ ಸಂಘಕ್ಕೆ ೩ ಲಕ್ಷ, ಬಸವೇಶ್ವರ ಮಹಿಳಾ ಸ್ವ ಸಹಾಯ ಸಂಘಕ್ಕೆ ೪ ಲಕ್ಷ ೮೦ ಸಾವಿರ, ಶ್ರೀ ಲಕ್ಷ್ಮೀ ಸ್ವ ಸಹಾಯ ಸಂಘಕ್ಕೆ ೩ ಲಕ್ಷ ೭೫ ಸಾವಿರ, ಶಾಲವಿ ಮಹಿಳಾ ಸ್ವ ಸಹಾಯ ಸಂಘಕ್ಕೆ ೪ ಲಕ್ಷ ೫೦ ಸಾವಿರ, ರಾಘವೇಂದ್ರ ಮಹಿಳಾ ಸ್ವ ಸಹಾಯ ಸಂಘಕ್ಕೆ ೪ ಲಕ್ಷ ೫೦ ಸಾವಿರ, ಚಾಮುಂಡೇಶ್ವರಿ ಮಹಿಳಾ ಸ್ವ ಸಹಾಯ ಸಂಘಕ್ಕೆ ೩ ಲಕ್ಷ ೮೪ ಸಾವಿರ, ದುರ್ಗಾ ಪರಮೇಶ್ವರಿ ಮಹಿಳಾ ಸ್ವ ಸಹಾಯ ಸಂಘಕ್ಕೆ ೬೬ ಸಾವಿರ, ಕಾಳಿಕಾಂಭ ಮಹಿಳಾ ಸ್ವಸಹಾಯ ಸಂಘಕ್ಕೆ ೧ ಲಕ್ಷ ೪ ಸಾವಿರ, ವರಲಕ್ಷ್ಮಿ ಮಹಿಳಾ ಸ್ವ ಸಹಾಯ ಸಂಘಕ್ಕೆ ೨ ಲಕ್ಷ ೬೫ ಸಾವಿರ, ಶ್ರೀ ಭಾರತಾಂಬೆ ಮಹಿಳಾ ಸ್ವ ಸಹಾಯ ಸಂಘಕ್ಕೆ ೮೪ ಸಾವಿರ, ಶ್ರೀ ಆಂಜನೇಯಸ್ವಾಮಿ ಮಹಿಳಾ ಸ್ವ ಸಹಾಯ ಸಂಘಕ್ಕೆ ೯೯ ಸಾವಿರ, ನಾಗಮಂಗಲ ಗ್ರಾಮದ ಶ್ರೀ ಲಕ್ಷ್ಮಿನಂದಿ ಮಹಿಳಾ ಸ್ವ ಸಹಾಯ ಸಂಘಕ್ಕೆ ೧ ಲಕ್ಷ ೬೦ ಸಾವಿರ ಹಾಗೂ ಬೆಳ್ಳೂಟಿ ಗ್ರಾಮದ ಶ್ರೀ ಲಕ್ಷ್ಮೀ ಮಹಿಳಾ ಸ್ವ ಸಹಾಯ ಸಂಘಕ್ಕೆ ೨ ಲಕ್ಷ ೮೫ ಸಾವಿರ ಸೇರಿದಂತೆ ಒಟ್ಟು ೩೫ ಲಕ್ಷ ೨ ಸಾವಿರ ರೂ ಗಳ ಸಾಲ ವಿತರಣೆ ಮಾಡಲಾಯಿತು.
ಶಿಡ್ಲಘಟ್ಟ ಡಿಸಿಸಿ ಬ್ಯಾಂಕ್ ಮೇಲ್ವಿಚಾರಕರಾದ ಆರ್.ಲಿಂಗರಾಜು, ವ್ಯವಸ್ಥಾಪಕ ಎಸ್.ಆನಂದ ಮಳಮಾಚನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರ ಸಂಘದ ನಿರ್ದೇಶಕರು ಈ ಸಂದರ್ಭದಲ್ಲಿ ಹಾಜರಿದ್ದರು.