ಜನಜೀವನದ ಎಲ್ಲಾ ವಿಭಾಗದಲ್ಲೂ ಕನ್ನಡ ಬಳಕೆ ಕಡ್ಡಾಯವಾಗಬೇಕೆನ್ನುವ ಒತ್ತಾಯವನ್ನು ಹೇರಬೇಕಾದ ಸಮಯದಲ್ಲಿ ನಾವಿನ್ನು ಕನ್ನಡ ಶಾಲೆಗಳನ್ನು ಮುಚ್ಚುವವರ ವಿರುದ್ಧ ಧ್ವನಿ ಎತ್ತಬೇಕಾದ ಸ್ಥಿತಿಯಲ್ಲಿದ್ದೆವೆ -ಎಂದು ಪ್ರಗತಿಪರ ಕುರಿ ಸಾಗಾಣಿಕೆದಾರರ ಸಹಕಾರ ಸಂಘದ ಅಧ್ಯಕ್ಷ ಸಿ.ವಿ.ಲೋಕೇಶ್ಗೌಡ ತಿಳಿಸಿದರು.
ತಾಲ್ಲೂಕಿನ ಚಿಕ್ಕದಾಸರಹಳ್ಳಿಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯೋತ್ಸವ ಸಂಭ್ರಮ ಸಂಪನ್ನಗೊಳ್ಳುವುದು ಕನ್ನಡದ ಸಮಸ್ಯೆಗಳಿಗೆ ಇತಿಶ್ರೀ ಹಾಡಿದಾಗಲೇ ಅನ್ನುವುದು ಸತ್ಯ. ಕನ್ನಡ ಪ್ರೀತಿ ನಿತ್ಯನೂತವಾಗಿರಲಿ. ಕನ್ನಡ ಕಟ್ಟುವ ಕಾರ್ಯವನ್ನು ಮುಂದುವರಿಸೋಣ. -ಕನ್ನಡಿಗರು ಮನಸ್ಸು ಮಾಡಿದರೆ ಕನ್ನಡ ಭಾಷೆಯ ಅಭಿವೃದ್ಧಿ, ಕನ್ನಡ ಪುಸ್ತಕಗಳ ಮಾರಾಟದ ಭರಾಟೆಗೆ ವೇಗೋತ್ಕರ್ಷ ತಂದುಕೊಡಲು ಸಾಧ್ಯವಿದೆ. ಬೆಂಗಳೂರಿನಲ್ಲಿ ವಾಸಿಸುವ ಕನ್ನಡಿಗರು ಕನ್ನಡವೂ ಅಲ್ಲದ ಇತ್ತ ಇಂಗ್ಲಿಷ್ ಕೂಡ ಅಲ್ಲದ ‘ಕಂಗ್ಲಿಷ್’ ಭಾಷೆಗೆ ಮೊರೆ ಹೋಗಿರುವುದು ಯಾವ ಪುರುಷಾರ್ಥಕ್ಕಾಗಿ. ನಮ್ಮ ನಮ್ಮ ಮನೆಗಳಲ್ಲಿ ದಿನ ಬೆಳಗಾದರೆ ಕೇಳಿಬರುವ ಭಾಷೆಯ ಇಂಪು ಕನ್ನಡದ್ದಾಗಿರಲಿ ಎಂದು ಹೇಳಿದರು.
ಗ್ರಾಮದ ಹಿರಿಯರಾದ ಬ್ಯಾಟರಾಯಶೆಟ್ಟಿ, ದಾಮೋದರ್, ಲಕ್ಷ್ಮಣಮೂರ್ತಿ, ಶಿಕ್ಷಕ ಕೆಂಪಣ್ಣ, ಗ್ರಾಮ ಪಂಚಾಯತಿ ಸದಸ್ಯರಾದ ಪಾಪಣ್ಣ, ದ್ಯಾವಪ್ಪ, ಉಪನ್ಯಾಸಕ ಈಶ್ವರ್, ಮಂಜುನಾಥ, ಚಲಪತಿ, ವೆಂಕಟೇಶ್, ಮಂಜುಳಾ ಸುರೇಶ್ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -