Home News ಕೆರೆಗೆ ಬಾಗಿನ ಅರ್ಪಣೆ

ಕೆರೆಗೆ ಬಾಗಿನ ಅರ್ಪಣೆ

0

ತಾಲೂಕಿನಾದ್ಯಂತ ಇತ್ತೀಚೆಗೆ ಬೀಳುತ್ತಿರುವ ಮಳೆಯಿಂದ ಬಹುತೇಕ ಕೆರೆಗಳು ತುಂಬಿರುವುದು ಸಂತಸದ ವಿಷಯವಾಗಿದೆ. ಇದರಿಂದಾಗಿ ಅಂತರ್ಜಲ ವೃದ್ಧಿಸಿ ಬರುವ ಬೇಸಿಗೆಯನ್ನು ಸಮರ್ಥವಾಗಿ ಎದುರಿಸಬಹುದಾಗಿದೆ ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ತಾಲ್ಲೂಕಿನ ಗಂಜಿಗುಂಟೆಯ ರೆಡ್ಡಿಕೆರೆ ಹಾಗೂ ನಿಮ್ಮನ್ನವಡ್ಡು ಕೆರೆ ತುಂಬಿ ಕೋಡಿ ಹೋಗಿದ್ದರಿಂದ ಶನಿವಾರ ಕೆರೆಗೆ ಬಾಗಿನ ಅರ್ಪಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ನಮ್ಮ ಪೂರ್ವಜರು ಕೆರೆಗಳನ್ನು ಅತ್ಯಂತ ವೈಜ್ಞಾನಿಕವಾಗಿ ನಿರ್ಮಿಸಿದ್ದರು. ಒಂದು ಕೆರೆಯ ನೀರು ಮತ್ತೊಂದಕ್ಕೆ ಹೋಗುವಂತೆ ರೀತಿಯಲ್ಲಿ ಕೆರೆಗಳ ಸಾಲೇ ನಮ್ಮಲ್ಲಿದೆ. ಆದರೆ ಹಲವಾರು ಕರೆಗಳನ್ನು ಒತ್ತುವರಿ ಮಾಡಿರುವ ಕಾರಣ ನೀರು ಶೇಖರಣೆಯ ಸಾಮರ್ಥ್ಯ ಕಡಿಮೆಯಾಗಿದೆ. ಎಂಟು ವರ್ಷಗಳಿಂದ ತುಂಬದ ಕೆರೆಗಳು ಈ ಬಾರಿ ತುಂಬಿ ಹರಿದು ನಮ್ಮಲ್ಲಿನ ಕೆರೆಗಳ ಮಹತ್ವದ ಬಗ್ಗೆ ಜಾಗೃತರನ್ನಾಗಿಸಿದೆ.
ವರುಣನ ಕೃಪೆಯಿಂದ ತಾಲ್ಲೂಕಿನಾದ್ಯಂತ ಮಳೆ ಹೀಗೇ ಮುಂದುವರೆದು ಕೆರೆಗಳು ತುಂಬಲಿ. ಇದರಿಂದ ಅಂತರ್ಜಲವೂ ಹೆಚ್ಚಾಗಲಿದೆ ಎಂದು ಹೇಳಿದರು.
ಗಂಜಿಗುಂಟೆ ಗ್ರಾಮ ಪಂಚಾಯಿತಿ ಸದಸ್ಯ ನರಸಿಂಹಮೂರ್ತಿ, ಮಾಜಿ ಉಪಾಧ್ಯಕ್ಷ ಮೂರ್ತಿ, ಎಂಪಿಸಿಎಸ್ ಅಧ್ಯಕ್ಷ ದೊಡ್ಡ ನರಸಿಂಹಪ್ಪ, ಮಾಜಿ ಅಧ್ಯಕ್ಷ ಕೃಷ್ಣಪ್ಪ, ಉಸ್ಮಾನ್ಸಾಬಿ, ದೊಣ್ಣಹಳ್ಳಿ ರಾಮಣ್ಣ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.