ತಾಲೂಕಿನ ತಲದುಮ್ಮನಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀಪ್ರಸನ್ನ ಆಂಜನೇಯಸ್ವಾಮಿ ದೇವಾಲಯದ ಆರಂಭೋತ್ಸವ ನಡೆಯಿತು.
ಬೆಳಗ್ಗೆಯ ವಿಘ್ನನಿವಾರಕ ವಿನಾಯಕನ ಪೂಜೆಯೊಂದಿಗೆ ಆರಂಭವಾದ ಪೂಜಾ ಪುನಸ್ಕಾರಗಳು ಸಂಜೆಯವರೆಗೂ ನಡೆದವು. ಶ್ರೀಪ್ರಸನ್ನ ಆಚಿಜನೇಯಸ್ವಾಮಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ನಾನಾ ಪೂಜೆ, ಹೋಮ, ಹವನಗಳನ್ನು ನಡೆಸಲಾಯಿತು.
ಮಹಾ ಮಂಗಳಾರತಿ ನೆರವೇರಿಸಿ ತೀರ್ಥ ಪ್ರಸಾದವನ್ನು ವಿನಿಯೋಗಿಸಲಾಯಿತು. ಜಿಲ್ಲಾ ಪಂಚಾಯಿತಿ ಸದಸ್ಯ ಎಸ್.ಎಂ.ನಾರಾಯಣಸ್ವಾಮಿ, ಗ್ರಾಮದ ಮುಖಂಡರಾದ ಟಿ.ಎಸ್.ರಾಮಚಂದ್ರಪ್ಪ, ಬಚ್ಚೇಗೌಡ, ಚನ್ನಕೃಷ್ಣ, ಕಂಬದಹಳ್ಳಿ ಶ್ರೀನಿವಾಸ್, ಮುನಿರಾಜು, ಮುನೇಗೌಡ, ದೇವರಾಜ್, ದ್ಯಾವಪ್ಪ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -