ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ಸೋಮವಾರ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಶ್ರೀರಾಮ ಭಜನೆ ಮಂಡಳಿಯ ಭಕ್ತ ವೃಂದದಿಂದ ಶ್ರೀ ಸೀತಾ ರಾಮ ಲಕ್ಷ್ಮಣ ಆಂಜನೇಯ ರಥೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಗ್ರಾಮದ ಪ್ರಮುಖ ಬೀದಿಗಳಲ್ಲಿ ನಾದಸ್ವರ ವಾದನದೊಂದಿಗೆ ಭಜನೆ ತಂಡದವರ ಹಾಡುಗಳೊಂದಿಗೆ ದೇವರನ್ನು ಮೆರವಣಿಗೆ ಮಾಡಲಾಯಿತು. ಸುತ್ತಮುತ್ತಲಿನ ಗ್ರಾಮಸ್ಥರು ಭಜನೆಯಲ್ಲಿ ಪಾಲ್ಗೊಂಡಿದ್ದರು.
ಭಜನೆ ಮಂಡಳಿಯ ನಾರಾಯಣಸ್ವಾಮಿ, ನಾಗಶೆಟ್ಟಿ, ದೊಡ್ಡರಂಗಯ್ಯ, ಎಂ.ಎಂ.ಸ್ವಾಮಿ, ರಾಮಾಂಜಿನಪ್ಪ, ಗೋಪಾಲ, ಕೇಶವ, ಸತೀಶ, ಆಂಜಿನಪ್ಪ ಹಾಜರಿದ್ದರು.