ನಗರದ ಶ್ರೀಸರಸ್ವತಿ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದಲ್ಲಿ ಕಳೆದ ೩೨ ವರ್ಷಗಳಿಂದ ಉರ್ದು ಹಾಗೂ ವಿಜ್ಞಾನ ವಿಭಾಗದ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ ಕೌಸರ್ ಪರ್ವೀನ್ ಅವರಿಗೆ ಆಡಳಿತ ಮಂಡಳಿ, ಪ್ರೌಢಶಾಲಾ ಸಿಬ್ಬಂದಿವರ್ಗ ಹಾಗೂ ಪ್ರಾಥಮಿಕ ಶಾಲಾ ಸಿಬ್ಬಂದಿ ವರ್ಗದವರಿಂದ ಆತ್ಮೀಯ ಬೀಳ್ಕೊಡುಗೆ ಸಮಾರಂಭವನ್ನು ಶನಿವಾರ ಏರ್ಪಡಿಸಲಾಗಿತ್ತು.
ನಿವೃತ್ತ ಶಿಕ್ಷಕಿಯ ಕುರಿತು ಶಿಕ್ಷಕರಾದ ಎನ್. ಸುಂದರನ್ ಹಾಗೂ ಎಂ. ಆರ್. ಬಾಲಗಂಗಾಧರ ತಿಲಕ್ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಮಾರ್ಗದರ್ಶಕ ಎನ್. ವೆಂಕಟಸುಬ್ಬರಾವ್, ಅಧ್ಯಕ್ಷೆ ವಿ. ಸೀತಾಲಕ್ಷ್ಮಿ, ಕಾರ್ಯದರ್ಶಿ ಎನ್. ಶ್ರೀಕಾಂತ್, ಪ್ರೌಢಶಾಲೆ ಮುಖ್ಯಶಿಕ್ಷಕ ಸೋಮಶೇಖರ್, ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಎಸ್. ಕೆ. ಗೋಪಿನಾಥ್, ಕೌಸರ್ ಪರ್ವೀನ್ ಹಾಗೂ ಅವರ ಪತಿ ನಿವೃತ್ತ ಕಂದಾಯ ಇಲಾಖೆ ಅಧಿಕಾರಿ ಸಮೀವುಲ್ಲಾ ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.
- Advertisement -
- Advertisement -
- Advertisement -
- Advertisement -