Home News ಮರಳು ಸಾಗಾಣಿಕೆ ವಾಹನಗಳ ವಶ

ಮರಳು ಸಾಗಾಣಿಕೆ ವಾಹನಗಳ ವಶ

0

ಖಚಿತ ಮಾಹಿತಿಯನ್ನಾದರಿಸಿ ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ ಹಾಗೂ ತಂಡ ಮಂಗಳವಾರ ರಾತ್ರಿ ಧಾಳಿ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ೨ ಲಾರಿ ಸೇರಿದಂತೆ ೪ ಟ್ರಾಕ್ಟರ್ಗಳನ್ನು ವಶಪಡಿಸಿಕೊಂಡಿದ್ದಾರೆ.
ತಾಲ್ಲೂಕಿನ ಸಾದಲಿ ಹೋಬಳಿ ಹಾಗೂ ಗಂಜಿಗುಂಟೆ ಸೇರಿದಂತೆ ತಾಲ್ಲೂಕಿನ ವಿವಿದೆಡೆ ರಾತ್ರಿ ಗಸ್ತು ನಡೆಸಿ ಮರಳು ಸಾಗಿಸುತ್ತಿದ್ದ ೨ ಲಾರಿ ಹಾಗು ೪ ಟ್ರಾಕ್ಟರ್ಗಳನ್ನು ವಶಪಡಿಸಿಕೊಳ್ಳುವುದರೊಂದಿಗೆ ತಹಶೀಲ್ದಾರ್ ಹಾಗೂ ತಂಡ ತಾಲೂಕಿನಲ್ಲಿ ಮರಳು ಅಕ್ರಮ ಸಾಗಾಣಿಕೆ ಕಡಿವಾಣ ಹಾಕಲು ಮುಂದಾಗಿದ್ದಾರೆ.
ಕಳೆದ ೪ ದಿನಗಳ ಹಿಂದಷ್ಟೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಸಭೆಯಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಮಾಫಿಯಾ ವಿರುದ್ಧ ಜಿಲ್ಲಾ ಮಟ್ಟದ ಅಧಿಕಾರಿಗಳ ವಿರುದ್ಧ ಜನಪ್ರತಿನಿಧಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು.
ಅಕ್ರಮ ಮರಳು ಸಾಗಾಣಿಕೆ ಮಾಡುವವರ ವಿರುದ್ದ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿರುವ ಹಿನ್ನಲೆಯಲ್ಲಿ ಶಿಡ್ಲಘಟ್ಟ ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ, ಕಸಬಾ ರಜಸ್ವ ನಿರೀಕ್ಷಕ ಸುಬ್ರಮಣಿ, ಗ್ರಾಮ ಲೆಕ್ಕಾಧಿಕಾರಿಗಳಾದ ಲಾರೆನ್ಸ್, ಆನಂದ್ ಮತ್ತಿತರರ ತಂಡ ಮಂಗಳವಾರ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಮರಳು ಸಾಗಾಣಿಕೆ ಮಾಡುತ್ತಿದ್ದ ವಾಹನಗಳನ್ನು ವಶಪಡಿಸಿಕೊಂಡು ಅಕ್ರಮ ಮರಳು ದಂಧೆಯನ್ನು ಮಟ್ಟ ಹಾಕಲು ಮುಂದಾಗಿದ್ದಾರೆ.