Home News ಶಿಕ್ಷಕರ ಬೀಳ್ಕೊಡುಗೆ ಕಾರ್ಯಕ್ರಮ

ಶಿಕ್ಷಕರ ಬೀಳ್ಕೊಡುಗೆ ಕಾರ್ಯಕ್ರಮ

0

ತಾಲ್ಲೂಕಿನ ಕನ್ನಮಂಗಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೧೭ ವರ್ಷ ಕಾರ್ಯ ನಿರ್ವಹಿಸಿದ ಶಿಕ್ಷಕ ಎಚ್.ಬಿ. ಮಂಜುನಾಥ್, ೬ ವರ್ಷ ಕಾರ್ಯ ನಿರ್ವಹಿಸಿದ ವಿದ್ಯಾಲಕ್ಷ್ಮಿ ಹಾಗೂ ಅಂಗನವಾಡಿ ಸಹಾಯಕಿಯಾಗಿ ೨೨ ವರ್ಷ ಕಾರ್ಯ ನಿರ್ವಹಿಸಿದ ಆಂಜನಮ್ಮ ಅವರಿಗೆ ಶನಿವಾರ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ವತಿಯಿಂದ ಅವರನ್ನು ಸನ್ಮಾನಿಸಲಾಯಿತು. ಮಕ್ಕಳು ಶಿಕ್ಷಕರ ಕುರಿತು ಬರೆದ ಲೇಖನಗಳ ಸಂಕಲನವನ್ನು ಶಿಕ್ಷಕರಿಗೆ ನೀಡಿದರು. ಶಿಕ್ಷಕರಿಗೆ ನೆನಪಿನ ಕಾಣಿಕೆಯಾಗಿ ಗಿಡವೊಂದನ್ನು ನೀಡಿದರು.
ಮುಖ್ಯ ಶಿಕ್ಷಕ ಎಚ್. ಮುನಿಯಪ್ಪ, ಸಹಶಿಕ್ಷಕರಾದ ಎಂ.ದೇವರಾಜ್, ಎಚ್.ಬಿ. ಮಂಜುನಾಥ್, ಕೆ.ಶಿವಶಂಕರ್, ಜೆ. ಶ್ರೀನಿವಾಸ್, ಎಸ್. ಕಲಾಧರ, ಟಿ.ಜೆ.ಸುನೀತ, ವಿದ್ಯಾಲಕ್ಷ್ಮಿ, ಕೆ. ಛಾಯಾದೇವಿ, ಎನ್.ಪದ್ಮಾವತಿ, ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ನಾಗರಾಜ್, ಸ್ನೇಹ ಯುವಕರ ಸಂಘದ ವಸಂತಕುಮಾರ್, ವಾಸುದೇವ್ ಸಿ.ಮುನಿರಾಜ್ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.