‘ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲ ಮಾಡಬೇಕು. ಪ್ರತಿಯೊಬ್ಬರೂ ಶಾಲೆಗೆ ಬರಬೇಕು. ಶಿಕ್ಷಣ ಪ್ರತಿಯೊಬ್ಬರ ಹಕ್ಕು’ ಎಂದು ಘೋಷಣೆ ಕೂಗುತ್ತಾ ನಗರದಲ್ಲಿ ಶ್ರೀ ಸರಸ್ವತಿ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿದ್ಯಾರ್ಥಿಗಳು ಜಾಥಾ ನಡೆಸಿದರು.
ನಗರದ ಟಿ.ಬಿ.ರಸ್ತೆಯಲ್ಲಿ ಬಸ್ ನಿಲ್ದಾಣದವರೆಗೂ ಜಾಥಾ ನಡೆಸಿದ ಮಕ್ಕಳು ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು. ಮಕ್ಕಳನ್ನು ದುಡಿಮೆಗೆ ಹಚ್ಚಬಾರದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.