ಸಮಸ್ತ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರ ಆಶೋತ್ತರಗಳಿಗೆ ಸ್ಪಂದಿಸಿ ಸಾಹಿತ್ಯ ಪರಿಷತ್ತಿನ ಘನತೆ ಗೌರವಗಳನ್ನು ಹೆಚ್ಚಿಸಲು ತಾಲ್ಲೂಕು ಅಧ್ಯಕ್ಷರಾದವರು ದಿಟ್ಟ ಹೆಜ್ಜೆ ಇಟ್ಟು ಕಾರ್ಯಪ್ರವೃತ್ತರಾಗಬೇಕೆಂದು ಜಿಲ್ಲಾ ಕ.ಸಾ.ಪ ಅಧ್ಯಕ್ಷ ಕೈವಾರ ಎನ್.ಶ್ರೀನಿವಾಸ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸಂಜೆ ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಯ ಸದಸ್ಯರೊಂದಿಗೆ ಚರ್ಚಿಸಿ ಕನ್ನಡ ಸಾಹಿತ್ಯ ಪರಿಷತ್ ಶಿಡ್ಲಘಟ್ಟ ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿ ಬಿ.ಆರ್.ಅನಂತಕೃಷ್ಣ ಅವರನ್ನು ಆಯ್ಕೆ ಮಾಡಿದ ನಂತರ ಅವರು ಮಾತನಾಡಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲೂ ಸಾಹಿತ್ಯ ಪರಿಷತ್ತು ಸಕ್ರಿಯವಾಗುತ್ತಿರುವ ಹಿನ್ನೆಲೆಯಲ್ಲಿ ಸಾಕಷ್ಟು ಮಂದಿ ಉತ್ಸಾಹಿ ಬಳಗ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗುತ್ತಿರುವುದರಿಂದ ತಾಲ್ಲೂಕು ಅಧ್ಯಕ್ಷರ ಕಾರ್ಯತತ್ಪರತೆಯನ್ನು ಓರೆಗಚ್ಚಬೇಕಾಗಿದೆ. ಹಾಗಾಗಿ ಎಲ್ಲಾ ತಾಲ್ಲೂಕು ಕ.ಸಾ.ಪ ಘಟಕಗಳಿಗೆ ಒಂದು ವರ್ಷಕ್ಕೆ ಅನ್ವಯವಾಗುವಂತೆ ಅಧ್ಯಕ್ಷರ ಆಯ್ಕೆಯನ್ನು ಮಾಡಿ, ಶಿಡ್ಲಘಟ್ಟ ತಾಲ್ಲೂಕಿನ ಅಧ್ಯಕ್ಷರನ್ನಾಗಿ ಬಿ.ಆರ್.ಅನಂತಕೃಷ್ಣ ರವರನ್ನು ಘೋಷಿಸಿದ್ದೇನೆ.
ಅತಿ ಶೀಘ್ರದಲ್ಲಿ ತಾಲ್ಲೂಕು ಕೇಂದ್ರದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಕಛೇರಿ ಆರಂಭಿಸಿ, ಹೋಬಳಿ ಘಟಕಗಳನ್ನು ರಚಿಸಲು ಸೂಕ್ತ ಅಭ್ಯರ್ಥಿಗಳನ್ನು ಗುರುತಿಸಲು ಸೂಚಿಸಿದ್ದೇನೆ. ಅರ್ಥಪೂರ್ಣ ಕಾರ್ಯಕ್ರಮದೊಂದಿಗೆ ತಾಲ್ಲೂಕು ಹಾಗೂ ಹೋಬಳಿ ಘಟಕಗಳ ಪದಗ್ರಹಣ ಕಾರ್ಯಕ್ರಮ ನಡೆಸಲು ತಿಳಿಸಿರುವುದಾಗಿ ಹೇಳಿದರು.
ಕ.ಸಾ.ಪ ಮಾಜಿ ಜಿಲ್ಲಾಧ್ಯಕ್ಷರಾದ ಎಸ್.ವಿ.ನಾಗರಾಜರಾವ್, ಮಾಜಿ ಜಿಲ್ಲಾ ಕೋಶಾಧ್ಯಕ್ಷ ವಾಸುದೇವಮೂರ್ತಿ, ನಿಕಟಪೂರ್ವ ತಾಲ್ಲೂಕು ಅಧ್ಯಕ್ಷ ಕೃ.ನ.ಶ್ರೀನಿವಾಸ್, ಡಾ.ಡಿ.ಟಿ.ಸತ್ಯನಾರಾಯಣರಾವ್, ಮಾಜಿ ಕ.ಸಾ.ಪ ತಾಲ್ಲೂಕು ಅಧ್ಯಕ್ಷ ವಿ.ಕೃಷ್ಣ, ನಿಕಟಪೂರ್ವ ಗೌರವ ಕಾರ್ಯದರ್ಶಿ ಕೆ.ಮಂಜುನಾಥ್, ಎಸ್.ಶಂಕರ್, ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಬಿ.ಸಿ.ನಂದೀಶ್, ಸುಂದರಾಚಾರಿ, ವೆಂಕಟೇಶಪ್ಪ, ಮಾಜಿ ಪುರಸಭಾ ಸದಸ್ಯ ಲಕ್ಷ್ಮೀನಾರಾಯಣ್, ತ್ಯಾಗರಾಜ್, ರಾಮಾಂಜಿ, ವೇಣು, ಮುನಿನಾರಾಯಣಪ್ಪ, ಎಸ್. ಸತ್ಯನಾರಾಯಣರಾವ್, ಬಿ.ಕೃಷ್ಣಮೂರ್ತಿ, ಭಾಸ್ಕರ್, ಮಧುಸೂದನ್, ಶಿವಕುಮಾರ್, ಚಿಂತಾಮಣಿ ಗಂಗರೆಡ್ಡಿ, ಮಂಜುನಾಥ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -