ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ರೈತ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಸೆಪ್ಟೆಂಬರ್ 21 ರಂದು ಬೆಂಗಳೂರಿನಲ್ಲಿ ಅಹೋರಾತ್ರಿ ಸತ್ಯಾಗ್ರಹ ಹಾಗೂ ವಿಧಾನಸೌಧ ಮುತ್ತಿಗೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಜಿಲ್ಲೆಯ ರೈತಬಾಂಧವರು ಒಗ್ಗೂಡಿ ಭಾಗವಹಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಭೈರೇಗೌಡ ಕೋರಿದರು.
ನಗರದ ರೈತ ಸಂಘದ ಕಚೇರಿಯಲ್ಲಿ ಶನಿವಾರ ಪೂರ್ವಭಾವಿ ಸಭೆಯನ್ನು ನಡೆಸಿ ಅವರು ಮಾತನಾಡಿದರು.
ಬೆಂಗಳೂರಿನಲ್ಲಿ ಸೆಪ್ಟೆಂಬರ್ 21 ರಂದು ಸೋಮವಾರ ಬೆಳಗ್ಗೆ 11 ಗಂಟೆಗೆ, ಮೌರ್ಯ ಸರ್ಕಲ್ ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಎದುರು ಭೂ ಸುಧಾರಣಾ ಕಾಯ್ದೆ, ಭೂ ಸ್ವಾಧೀನ ಕಾಯ್ದೆ, ವಿದ್ಯುತ್ ಕಾಯ್ದೆ, ಅಗತ್ಯ ವಸ್ತುಗಳ ಕಾಯ್ದೆ, ಕಾರ್ಮಿಕ ಕಾಯ್ದೆ, ಎಪಿಎಂಸಿ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ಅಹೋರಾತ್ರಿ ಸತ್ಯಾಗ್ರಹ ಹಾಗೂ ವಿಧಾನ ಸೌಧ ಮುತ್ತಿಗೆಯನ್ನು ಹಮ್ಮಿಕೊಂಡಿರುವುದರಿಂದ ಪಕ್ಷಾತೀತವಾಗಿ ಬೃಹತ್ ಸಂಖ್ಯೆಯಲ್ಲಿ ಎಲ್ಲಾರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ರೈತ ಸಂಘದ ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಮುನಿನಂಜಪ್ಪ ಹಾಜರಿದ್ದರು.