ಪಟ್ಟಣದ ಅಶೋಕ ರಸ್ತೆಯಲ್ಲಿರುವ ಕಾಶೀವಿಶ್ವೇಶ್ವರಸ್ವಾಮಿ ದೇವಾಲಯದಲ್ಲಿ ಶನಿವಾರ ಅಯ್ಯಪ್ಪಸ್ವಾಮಿ ಭಕ್ತ ಮಂಡಳಿಯವರಿಂದ 44ನೇ ವರ್ಷದ ದೀಪಾರಾಧನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಶನಿವಾರ ಬೆಳಿಗ್ಗೆ ಅಯ್ಯಪ್ಪಸ್ವಾಮಿಗೆ 101 ಲೀಟರ್ ಹಾಲಿನ ಅಭಿಷೇಕ, ಹೂವಿನ ಅಲಂಕಾರ, ಭಜನೆ, ತೀರ್ಥಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು.
‘ಹಲವಾರು ವರ್ಷಗಳಿಂದ ಸತತವಾಗಿ ಪ್ರತಿ ವರ್ಷವೂ ವಿಜೃಂಭಣೆಯಿಂದ ದೀಪಾರಾಧನೆ, ಹಾಲಿನ ಅಭಿಷೇಕ ಮತ್ತು ವಿಶೇಷ ಅಲಂಕಾರದೊಂದಿಗೆ ಅಯ್ಯಪ್ಪ ಭಕ್ತರು ಅಯ್ಯಪ್ಪಸ್ವಾಮಿಯ ಪೂಜಾ ಮಹೋತ್ಸವವನ್ನು ನೆರವೇರಿಸುತ್ತಾ ಬಂದಿದ್ದೇವೆ. ಈ ಬಾರಿ ಹಾಲಿನ ಅಭಿಷೇಕ, ತುಪ್ಪದ ಅಭಿಷೇಕ ಮತ್ತು 101 ಕಲಶ ಸ್ಥಾಪಿಸಿ ಹೋಮವನ್ನು ಸಹ ನಡೆಸಿದ್ದೇವೆ. ಮಧ್ಯಾಹ್ನ ಭಜನೆ ಕಾರ್ಯಕ್ರಮ ಹಾಗೂ ಸಂಜೆ ಪುಟ್ಟ ಮಕ್ಕಳು ದೀಪಗಳೊಂದಿಗೆ ಮುನ್ನಡೆಸುತ್ತಾ ಊರಿನ ಪ್ರಮುಖ ಬೀದಿಗಳಲ್ಲಿ ಹೂವಿನ ಪಲ್ಲಕ್ಕಿಯಲ್ಲಿ ಅಯ್ಯಪ್ಪಸ್ವಾಮಿಯ ಉತ್ಸವವನ್ನು ಮಂಗಳ ವಾದ್ಯಗಳೊಂದಿಗೆ ಏರ್ಪಡಿಸಲಾಗಿದೆ’ ಎಂದು ಎಂ.ಎಂ.ಕೃಷ್ಣಪ್ಪ ತಿಳಿಸಿದರು.
- Advertisement -
- Advertisement -
- Advertisement -
- Advertisement -