ನಗರದ ಸ್ವಚ್ಛತೆಯನ್ನು ಮತ್ತು ಸಾರ್ವಜನಿಕ ಸ್ವಾಸ್ಥ್ಯವನ್ನು ಕಾಪಾಡುವ ಪೌರಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ಪೌರಸೇವಾ ನೌಕರರ ಸಂಘದ ವತಿಯಿಂದ ಮಂಗಳವಾರ ನಗರದ ನಗರೇಶ್ವರ ಕಲ್ಯಾಣಮಂಟಪದಲ್ಲಿ ಆಯೋಜಿಸಿದ್ದ ನಾಲ್ಕನೇ ವರ್ಷದ ಪೌರಕಾರ್ಮಿಕ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪೌರಕಾರ್ಮಿಕರು ಇತರರಿಗಿಂತ ಬೇಗ ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆಗಳು ಇವೆ. ಆಧುನಿಕ ಪರಿಕರಗಳು, ವೈದ್ಯಕೀಯ ಸೌಲಭ್ಯ, ಸೂಕ್ತ ವೇತನ ಪೌರಕಾರ್ಮಿಕರಿಗೆ ಅಗತ್ಯವಿದೆ. ಗಾಂಧೀಜಿ ಸ್ವಚ್ಛತೆಗೆ ಪ್ರಾಧಾನ್ಯತೆಯನ್ನು ನೀಡಿದ್ದರು. ಅವರು ಪೌರಕಾರ್ಮಿಕರ ಕೆಲಸವನ್ನು ಗೌರವದಿಂದ ಕಾಣಬೇಕೆಂದು ತಿಳಿಸಿರುವು ಸಾರ್ವಕಾಲಿಕ ಸತ್ಯವಾಗಿದೆ ಎಂದು ಹೇಳಿದರು.
ಪೌರಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಮುರಳಿ ಮಾತನಾಡಿ, ಸರ್ಕಾರದಿಂದ ಪೌರಕಾರ್ಮಿಕರಿಗೆ ವಸತಿಗೃಹಗಳ ನಿರ್ಮಾಣ ಮಾಡಲು ಆದೇಶ ಬಂದಿದ್ದು, ಅದಕ್ಕಾಗಿ ಸ್ಥಳವನ್ನು ಪರಿಶೀಲಿಸಿ ತ್ವರಿತ ಗತಿಯಲ್ಲಿ ಕಾಮಗಾರಿ ನಡೆಸಬೇಕಿದೆ ಎಂದು ಹೇಳಿದರು.
ನಿವೃತ್ತರಾಗಿರುವ ನಗರಸಭೆಯ ಕಂದಾಯ ನಿರೀಕ್ಷಕ ಷಮೀವುಲ್ಲಾ ಅವರನ್ನು ಸನ್ಮಾನಿಸಲಾಯಿತು.
ನಗರಸಭೆ ಅಧ್ಯಕ್ಷೆ ಮುಷ್ಠರಿ ತನ್ವೀರ್, ಜಿಲ್ಲಾ ನಗರ ಯೋಜನಾಧಿಕಾರಿ ನಾಗರಾಜಶೆಟ್ಟಿ, ನಗರಸಭೆ ಪೌರಾಯುಕ್ತ ಹರೀಶ್, ರಾಂಪ್ರಕಾಶ್, ನಗರಸಭೆ ಸದಸ್ಯ ಅಫ್ಸರ್ಪಾಷ, ಶ್ರೀನಾಥ್, ತನ್ವೀರ್ಪಾಷ, ಶಂಕರಪ್ಪ, ಪ್ರಸಾದ್ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -